Breaking News

ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ: ಅಖ್ತರ್‌ನನ್ನ ಕುಟುಕಿದ ಕಪಿಲ್ ದೇವ್

Spread the love

ನವದೆಹಲಿ: ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಇಂಡೋ-ಪಾಕ್ ಕ್ರಿಕೆಟ್ ಬಗ್ಗೆ ನಿಲುವನ್ನು ಪುನರುಚ್ಚರಿಸಿದ್ದಾರೆ.

ಇಂಡೋ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಉಭಯ ದೇಶಗಳ ನಡುವಿನ ರಾಜಕೀಯ, ಗಡಿ ಸಂಬಂಧದಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಆಡುವ ಯಾವುದೇ ಅವಕಾಶವಿಲ್ಲ. ಹಾಗಿದ್ದರೂ ಅಭಿಮಾನಿಗಳು ಐಸಿಸಿ ನಡೆಸುವ ಏಕದಿನ, ಟಿ20 ಎರಡೂ ಮಾದರಿಯ ವಿಶ್ವಕಪ್ ಹಾಗೂ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ-ಪಾಕ್ ನಡುವ ಪಂದ್ಯ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ.

ಕೋವಿಡ್-19 ಸಾಂಕ್ರಾಮಿಕವು ಆರ್ಥಿಕತೆಯ ಮೇಲೆ ಭಾರೀ ಹೊಡೆತ ಕೊಟ್ಟಿದೆ. ಹೀಗಾಗಿ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಹಣವನ್ನು ಸಂಗ್ರಹಿಸಲು ಇಂಡೋ-ಪಾಕ್ ಸರಣಿಯನ್ನು ಪ್ರಸ್ತಾಪಿಸಿದ್ದರು. ಆದರೆ ಕಪಿಲ್ ದೇವ್ ಅವರು ನಮಗೆ ಹಣದ ಅವಶ್ಯಕತೆ ಇಲ್ಲ. ನಾವು ಏಕೆ ಕ್ರಿಕೆಟಿಗರ ಜೀವನವನ್ನು ಅಪಾಯಕ್ಕೆ ದೂಡಬೇಕು ಎಂದು ಈ ಹಿಂದೆ ತಿರುಗೇಟು ನೀಡಿದ್ದರು.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ