Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

Spread the love

ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು ಮಾತಿಗೂ ಬಂದ್ ಕರೆ ನೀಡುತ್ತಿವೆ. ಇದರ ನಷ್ಟ ಕನ್ನಡಿಗರಿಗೆ ಆಗುತ್ತಿದೆ ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ರ‍್ಯಾಲಿಯನ್ನು ಕರವೇ ಆಯೋಜನೆ ಮಾಡಲಿದೆ. ರ‍್ಯಾಲಿ ಮೂಲಕ ಮುಖ್ಯಮಂತ್ರಿಗಳಿಗೆ ವರದಿ ಜಾರಿ ಮಾಡಬೇಕು ಎಂದು ಒತ್ತಡ ಹಾಕಲಾಗುವುದು ಹಾಗೂ ನಾಳೆಯ ಬಂದ್‍ನಲ್ಲಿ ಯಾವುದೇ ಕರವೇ ಕಾರ್ಯಕರ್ತರು ಭಾಗವಹಿಸುವುದಿಲ್ಲ ಎಂದು ನಾರಾಯಣಗೌಡ ಸ್ಪಷ್ಟ ಪಡಿಸಿದರು.


Spread the love

About Laxminews 24x7

Check Also

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್​ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್​ ವಿತರಣೆ

Spread the love ಆನೇಕಲ್: ದೇಶಕ್ಕಾಗಿ ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ