ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಮೇಕೆದಾಟು ಯೋಜನೆಯ ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಆಗಸ್ಟ್ 3ರಂದು ಈ ವಿಚಾರವಾಗಿ ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್ಗೆ ಕರ್ನಾಟಕ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ.
ಉಭಯ ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದವು ದಶಕಗಳಿಂದಲೂ ಇದ್ದು, ಪ್ರತಿ ಬೇಸಿಗೆಯಲ್ಲಿ ಇದು ತಾರಕಕ್ಕೇರುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರವು ಸಂಧಾನದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದೆ. ಹೀಗಾಗಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆಗೆ ನಾವು ಸಿದ್ಧ. ಸದ್ಯ ಕಾವೇರಿ ಕುರಿತು ಹೆಚ್ಚಿನ ಮಾಹಿತಿ ಬಹಿರಂಗಪಡಿಸುವುದಿಲ್ಲ ಅಂತ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ವಿಚಾರದಲ್ಲಿ 2 ರಾಜ್ಯದವರು ಕುಳಿತು ಮಾತುಕತೆ ಆಡೋದು ಒಳ್ಳೆಯದು ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Laxmi News 24×7