Breaking News
Home / ಅಂತರಾಷ್ಟ್ರೀಯ / ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್

ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್

Spread the love

ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್‍ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ.

ಹೌದು. ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್ ಈಗ ಉತ್ತರಾಖಂದದ ಕಾಡಿನತ್ತ ಕ್ಯಾಮರಾ ಹಿಡಿದು ಹೊರಟಿದ್ದಾರೆ. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್‌ಲೈಫ್‌ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದಾರೆ. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ದರ್ಶನ್ ಸಿನಿಮಾ ಕೆಲಸದ ಜೊತೆಗೆ ವೈಲ್ಡ್‌ಲೈಫ್‌ ಫೋಟೋಗ್ರಾಫಿಯನ್ನು ಇಷ್ಟಪಡುತ್ತಾರೆ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಗಲಿಗೆ ಕ್ಯಾಮರಾ ಏರಿಸಿಕೊಂಡು ಬಂಡಿಪುರ, ಕಬಿನಿ ಹಿನ್ನೀರು ಸುತ್ತಮುತ್ತದ ಕಾಡಿನ ಕಡೆಗೆ ಸಾರಥಿ ಹೋಗುತ್ತಾರೆ.

ಅಷ್ಟೇ ಅಲ್ಲದೆ ಈ ಬಾರಿ ಕೂಡ ದರ್ಶನ್ ತೆಗೆದ ಫೋಟೋಗಳು ಪ್ರದರ್ಶನಗೊಳ್ಳಲಿದೆ. ಚಾಲೆಂಜಿಂಗ್ ಸ್ಟಾರ್ ನ ಕೈಚಳಕದಲ್ಲಿ ಮೂಡಿ ಬಂದ ಫೋಟೋ ಖರೀದಿಸಲು ಕಲಾವಿದರು ಸೇರಿದಂತೆ ಡಿ ಬಾಸ್ ಫ್ಯಾನ್ಸ್ ಕಾದು ಕುಳಿತಿದ್ದಾರೆ.


Spread the love

About Laxminews 24x7

Check Also

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

Spread the loveತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ