Breaking News

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ

Spread the love

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ .

ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ , ಅಲ್ಲಿ ದಾಖಲಿಸುವ ಮುನ್ನವೇ ಕೊನೆಯುಸಿರೆಳದನೆಂದು ಪೊಲೀಸ್ ಮೂಲಗಳು ತಿಳಿಸಿವೆ .

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರನ್ನು ಬಂಧಿಸಲು ಜಾಲ ಬೀಸಲಾಗಿದೆ


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ