Breaking News

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ

Spread the love

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ .

ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ , ಅಲ್ಲಿ ದಾಖಲಿಸುವ ಮುನ್ನವೇ ಕೊನೆಯುಸಿರೆಳದನೆಂದು ಪೊಲೀಸ್ ಮೂಲಗಳು ತಿಳಿಸಿವೆ .

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರನ್ನು ಬಂಧಿಸಲು ಜಾಲ ಬೀಸಲಾಗಿದೆ


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ