ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ.
ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು ಬಂದಿಲ್ಲ.
ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.