Breaking News
Home / ಜಿಲ್ಲೆ / ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ 2 ಖಾಸಗಿ ಆಸ್ಪತ್ರೆಗಳು ಬಂದ್- ಜಿಲ್ಲಾಧಿಕಾರಿ

ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ 2 ಖಾಸಗಿ ಆಸ್ಪತ್ರೆಗಳು ಬಂದ್- ಜಿಲ್ಲಾಧಿಕಾರಿ

Spread the love

ಕಲಬುರಗಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಭಯಾನಕ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ರಜ್ಯದಲ್ಲಿ ಸಹ 181ಕ್ಕೆ ತಲುಪಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ವೈರಸ್ ಲಕ್ಷಣಗಳಿರುವವರ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ಎಚ್ಚರಿಕೆ ನೀಡಿದ್ದು, ಶಂಕಿತ ಕೊರೋನಾ ರೋಗಿಗಳನ್ನು ಬಹಳ ದಿನಗಳ ಕಾಲ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿಕೊಂಡು ರೋಗ ಉಲ್ಬಣಿಸಿದ ಬಳಿಕ ಇಎಸ್‍ಐ ಮತ್ತು ಜಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಇದರಿಂದಾಗಿ ಸಾವು ಸಂಭವಿಸುತ್ತದೆ. ಹೀಗಾಗಿ ಇಂತಹ ಆಸ್ಪತ್ರೆಗಳನ್ನು ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಸ್ಟಾರ್ ಆಸ್ಪತ್ರೆ ಸಿಬ್ಬಂದಿ ಕೊರೊನಾ ರೋಗ ಲಕ್ಷಣವುಳ್ಳ ರೋಗಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಜೊತೆಗೆ ಆಸ್ಪತ್ರೆಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳನ್ನು ಇಟ್ಟುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸ್ಟಾರ್ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ. ಅದೇ ರೀತಿ ಬಹಮನಿ ಆಸ್ಪತ್ರೆಯನ್ನು ಬಂದ್ ಮಾಡಿ, ಸಿಬ್ಬಂದಿಯನ್ನು ಕ್ವಾರೈಂಟೀನ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವ ಯತ್ನ ನಗರದಲ್ಲಿ ನಡೆದಿದೆ. ಇದು ಸ್ವತಃ ಜಿಲ್ಲಾಡಳಿತ ಅಥವಾ ಜಿಲ್ಲಾಧಿಕಾರಿಗಳ ಮೇಲೆ ನಡೆಸಿರುವ ಹಲ್ಲೆಯಂತಾಗಿದೆ. ಹಲ್ಲೆನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಆಶಾ ಕಾರ್ಯಕರ್ತೆಯರು ಸರ್ಕಾರದ ಆದೇಶದ ಮೇರೆಗೆ ಆರೋಗ್ಯ ತಪಾಸಣೆಗೆ ಮನೆ-ಮನೆಗೆ ಭೇಟಿ ನೀಡುತ್ತಾರೆ. ಜನಗಣತಿ, ಎನ್‍ಪಿಆರ್ ಮತ್ತಿತರ ಯಾವುದೇ ಸರ್ವೇ ಮಾಡಿಸುತ್ತಿಲ್ಲ. ಅವರಿಗೆ ಸಹಕಾರ ನೀಡಬೇಕೆಂದು ಎಂದು ಅವರು ಕೋರಿದ್ದಾರೆ

ದೆಹಲಿ ಮತ್ತು ಇತರೆಡೆ ತೆರಳಿದ್ದ ಜಮಾತ್ ತಬ್ಲೀಘಿ ಸದಸ್ಯರು ಮುಕ್ತವಾಗಿ ಮುಂದೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದರು. ಇನ್ನು ನಗರದ ಆಸ್ಪತ್ರೆಗಳಲ್ಲಿರುವ ಆರೋಗ್ಯ ಕಾರ್ಯಕರ್ತೆಯರು ರೋಗಿಗಳನ್ನು ಸರಿಯಾಗಿ ಪ್ರಾಥಮಿಕ ಪರೀಕ್ಷೆ ಕೂಡ ನಡೆಸದೆ, ಇಎಸ್‍ಐ ಆಸ್ಪತ್ರೆಗೆ ಹೋಗುವಂತೆ ಶಿಫಾರಸು ಮಾಡುತ್ತಿರುವುದು ತಿಳಿದು ಬಂದಿದೆ. ಈ ಸಂಬಂಧ ನಿರ್ಲಕ್ಷ್ಯ ತೋರುವ “ಡಿ” ಗ್ರೂಪ್ ನಿಂದ ಹಿಡಿದು ವೈದ್ಯರ ವರೆಗೆ ಆರೋಗ್ಯ ತುರ್ತುಪರಿಸ್ಥಿತಿ ಉಲ್ಲಂಘನೆ ಆರೋಪದ ಮೇಲೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಮದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ