ಕೋಲಾರ: ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಲಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹರೀಶ್(32) ಕೊಲೆಯಾದ ವ್ಯಕ್ತಿ, ಹೊಡೆತದ ರಭಸಕ್ಕೆ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರೋಪಿಗಳು ಬೃಹತ್ ಕಲ್ಲನ್ನು ಎತ್ತಿ ಹಾಕಿದ್ದಾರೆ. ಅಲ್ಲದೆ ಘಟನೆ ನಂತರ ಕಲ್ಲನ್ನು ಸ್ಥಳದಲ್ಲಿ ಬಿಡದೆ ಅದನ್ನೂ ಎತ್ತಿಕೊಂಡು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆರೋಪಿಗಳು ಹಾಗೂ ಕಲ್ಲಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
Laxmi News 24×7