Breaking News

ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡ್ತಿದ್ರು: ಸಂಸದ ಮುನಿಸ್ವಾಮಿ

Spread the love

ಕೋಲಾರ: ಲಾಕ್‍ಡೌನ್ ಮುಂದುವರೆಸಿರುವ ಪ್ರಧಾನಿ ಮೋದಿ ಬಡವರಿಗೆ ಯಾವುದೇ ಯೋಜನಗಳನ್ನು ನೀಡಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ ಎಂದು ಇಡೀ ಪ್ರಪಂಚಕ್ಕೆ ಗೊತ್ತಿದೆ ಮೋದಿ ಅವರು ಮಾಡಿರುವ ಯೋಜನೆಗಳು ಎಲ್ಲಾ ಜನಾಂಗದವರು ಮತ್ತು ದೇಶ ಮೆಚ್ಚಿಕೊಳ್ಳುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಈ ರೀತಿ ಹೇಳಿಕೆ ನೀಡುವುದು ಸಹಜ, ಇಂತಹ ಪರಿಸ್ಥಿತಿಯಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಪಕ್ಷಾತೀತವಾಗಿ ಬೆಂಬಲ ನೀಡುವಂತಹ ಕೆಲಸ ಆಗಬೇಕು. ಸಿದ್ದರಾಮಯ್ಯನವರು ಇದರಲ್ಲಿ ರಾಜಕೀಯ ಮಾಡಬಾರದು. ಪ್ರಧಾನಿ ಮೋದಿ, ಬಿಎಸ್‍ವೈ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಅವರಿಗೆ ಪಕ್ಷಾತೀತವಾಗಿ ಬೆಂಬಲ ಕೊಡಬೇಕು ಎಂದರು.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ