ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ.
ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು.
ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು ಇರಲಿದೆ. ಜೊತೆಗಿದ್ದವರು ಸಹ ಟಿಕೆಟ್ ಕೇಳುವುದು ತಪ್ಪೇನಿಲ್ಲ. ಆದ್ರೆ ಅಕಾಂಕ್ಷಿ ಎಷ್ಟೇ ಜನ ಇದ್ದರು ಈ ವಿಷಯದಲ್ಲಿ ಹೈಕಮಾಂಡ ಅಂತಿಮ ನಿರ್ಧಾರವಾಗಲಿದೆ.
ರಾಜ್ಯಸಭಾ ಚುನಾವಣೆ ಟಿಕೆಟ್ ರಮೇಶ್ ಕತ್ತಿ ಅವರು ಕೇಳುತ್ತಿದ್ದಾರೆ. ಈ ಹಿಂದೆ ನಾನು ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ದೆ. ಟಿಕೆಟ್ ನೀಡುವುದು ಪಕ್ಷಕ್ಕೆ ಬಿಟ್ಟಿರುವ ವಿಚಾರವಾಗಿದೆ ಎಂದು ತಿಳಿಸಿದರು.
ಇನ್ನೂ ಉಮೇಶ ಕತ್ತಿ ಔತಣ ಕೂಟದ ವಿಚಾರವಾಗಿ ಪ್ರತಿಕ್ರಿಸಿ, ಉಮೇಶ ಕತ್ತಿ ಮನೆಗೆ ಊಟಕ್ಕೆ ಹೋಗಿದ್ದರು. ಆದ್ರೆ ಅದು ಭಿನ್ನಮತ ವಲ್ಲ. ಸಿಎಂ ಯಡಿಯೂರಪ್ಪನವರ ತಮ್ಮ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ.ಇದರಲ್ಲಿ ಯಾವುದೇ