Breaking News
Home / ಜಿಲ್ಲೆ / ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್: ಕೋಟ ಶ್ರೀನಿವಾಸ ಪೂಜಾರಿ

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್: ಕೋಟ ಶ್ರೀನಿವಾಸ ಪೂಜಾರಿ

Spread the love

ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಖಾಸಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೂ ದಿನಸಿ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಆದರೆ ಸ್ಥಳೀಯ ಅಂಗಡಿಗಳಲ್ಲಿ ಮಾತ್ರ ದಿನಸಿ, ತರಕಾರಿ ಖರೀದಿಸಬಹುದಾಗಿದೆ. ತಮ್ಮ ವಾಹನಗಳಲ್ಲಿ ಬೇರೆ ಕಡೆ ಖರೀದಿಗೆ ಹೋದ್ರೆ ವಾಹನ ಜಪ್ತಿ ಮಾಡಲಾಗುತ್ತಿದ್ದು, ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲೂ ಖಾಸಗಿ ಸಂಚಾರ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ ವಾಹನ ಜಪ್ತಿ ಕ್ರಮ ಮಂಗಳೂರಿನಲ್ಲಿ ಬಹುತೇಕ ಸಕ್ಸಸ್ ಆಗುತ್ತಿದ್ದು, ಜನ ನಡೆದುಕೊಂಡೇ ಸ್ಥಳೀಯ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಆದರೆ ಕೆಲವರು ಆದೇಶ ದಿಕ್ಕರಿಸಿ ವಾಹನ ರಸ್ತೆಗಿಳಿಸಿದ್ದಾರೆ. ಸ್ಥಳೀಯ ಆಂಗಡಿಗಳನ್ನು ಬಿಟ್ಟು ಕದ್ರಿಯ ಮಲ್ಲಿಕಟ್ಟೆ ಮಾರುಕಟ್ಟೆ ವಾಹನಗಳಲ್ಲಿ ಜನರು ಬರುತ್ತಿದ್ದು, ಜಿಲ್ಲಾಡಳಿತದ ಆದೇಶಕ್ಕೆ ಕಿಮ್ಮತ್ತು ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂತಹ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಗುಜರಾತ್: ಗೌತಮ್ ಅದಾನಿ ಸಮ್ಮುಖದಲ್ಲಿ ಲ್ಯಾಕ್ಟೋಫೆರಿನ್ ಘಟಕ ಉದ್ಘಾಟಿಸಿದ ಶರದ್ ಪವಾರ್

Spread the love ವಾಸ್ನಾ (ಗುಜರಾತ್): ಗುಜರಾತ್​ನಲ್ಲಿ ದೇಶದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಂಟ್ ಎಕ್ಸ್‌ಮ್‌ಪವರ್​ಅನ್ನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ