Breaking News

ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ

Spread the love

 

ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ ಕಂಡು ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಎಂದಿನಂತೆ ಮಂತ್ರಿಮಂಡಲದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ದೊರಕದಿರುವುದು ಹಾಗೂ ಇಡೀ ಕಲ್ಯಾಣ ಕರ್ನಾಟಕ ದಿಂದ ಅಶಕ್ತ ಭಾವನೆಯಿಂದ ನೋಡಿರುವುದು ಪ್ರಾತಿನಿಧ್ಯ ನೀಡದಿರುವುದು ಹಾಗೂ ಬಿಜೆಪಿಯು ಕಲ್ಯಾಣ ಕರ್ನಾಟಕದ ಈ ಭಾಗವನ್ನು ಪ್ರಮುಖವೆಂದು ಪರಿಗಣಿಸಿಲ್ಲ ಎನ್ನುವುದನ್ನು ನಿರೂಪಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ

Spread the loveರಾಮದುರ್ಗ: ಪ್ರತಿ ವಾರ ನಡೆಯುವ ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಶಾಸಕ ರಮೇಶ್ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ