ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ.
ದಡದ ಮರದ ಕೊಂಬೆಯಲ್ಲಿ ಶವ ಪತ್ತೆ..
ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು.
ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು.
ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ ಶವ ಪತ್ತೆಯಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laxmi News 24×7