Breaking News

ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ: KSRTC ಎಂಡಿ

Spread the love

ಬೆಂಗಳೂರು: ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ ಮಾಡುತ್ತೇವೆ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಶಿವಯೋಗಿ ಕಳಸದ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ

ಇಂದು ಸಭೆ ನಡೆಸಿ ನಾಲ್ಕನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಯನ್ನು ಇಂದು ಮಧ್ಯಾಹ್ನ ಮಾಡಿದ ಬಿಎಸ್ ಯಡಿಯೂರಪ್ಪನವರು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್‍ಗಳು, ಆಟೋ ಮತ್ತು ಟ್ಯಾಕ್ಸಿಗಳು ಓಡಾಡಲು ಅನುಮತಿ ನೀಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.

ಈಗ ಬಸ್ ಸಂಚಾರ ಮಾಡುವ ವಿಚಾರದ ಬಗ್ಗೆ ಮಾತನಾಡಿರುವ ಅವರು, ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್ ಗಳ ಬಸ್‍ಗಳನ್ನು ಬಿಡುತ್ತೇವೆ. ಆದರೆ ಡಿಮ್ಯಾಂಡ್ ಎಷ್ಟಿದೆ ಎಂದು ಗೊತ್ತಾಗುತ್ತಿಲ್ಲ. ಹೀಗಾಗಿ ಮೊದಲ ವಾರ ಪ್ರಾಥಮಿಕ ಹಂತದಲ್ಲಿ ಶೇ.20 ರಿಂದ 30 ರಷ್ಟು ಬಸ್ ಗಳು ಮಾತ್ರ ಕಾರ್ಯಚರಣೆ ಇಳಿಯುತ್ತವೆ. ಎರಡನೇ ವಾರದಲ್ಲಿ ಬಹುತೇಕ ಹೆಚ್ಚಿನ ಬಸ್‍ಗಳ ಬಿಡುತ್ತೇವೆ. ಈ ವೇಳೆ 30 ಸೀಟ್ ಗಳಿಗೆ ಮಾತ್ರ ಪ್ರಯಾಣಿಕರಿಗೆ ಅವಕಾಶ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ