Breaking News

ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ

Spread the love

ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ ಓಪನ್ ಇತ್ತು ಬೈಕ್ ಏಕಾಏಕಿ ಅಡ್ಡಬಂದಿದೆ. ಚಾಲಕನಿಗೆ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ನನ್ನ ಮಗನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆತ ಮನೆಗೆ ಬಂದ ಬಳಿಕ ಆಸ್ಪತ್ರೆಯಿಂದ ಕರೆ ಬಂದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಪಘಾತದಂತಹ ಘಟನೆಯಲ್ಲಿ ಸಚಿವರ ಮಗನ ಹೆಸರು ಕೇಳಿಬಂದಾಗ ಕೆಲ ಚರ್ಚೆಗಳು ನಡೆಯುವುದು ಸಹಜ. ಪೊಲೀಸ್ ತನಿಖೆ ವೇಳೆ ಇದ್ದ ವಿಷಯವನ್ನು ಇದ್ದಂತೆಯೇ ಹೇಳಬೇಕು. ಕಾರು ಚಾಲಕನ ವಿಚಾರಣೆ ಕೂಡ ನಡೆದಿದೆ. ತನಿಖೆ ನಡೆಯುತ್ತಿದೆ ನೋಡೋಣ ಎಂದು ಹೇಳಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ