Breaking News

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

Spread the love

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ.

ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದಿದ್ದಾರೆ.

ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ