Breaking News

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

Spread the love

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ.

ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದಿದ್ದಾರೆ.

ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ