Breaking News

ಡಿ.ವೈ. ಪಾಟೀಲ ಮನೆಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

Spread the love

ಕೊಲ್ಹಾಪುರ: ಮಹಾರಾಷ್ಟ್ರದ ಹಿರಿಯ ನಾಯಕರು, ಮಾಜಿ ರಾಜ್ಯಪಾಲರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಡಿ.ವೈ. ಪಾಟೀಲ ಅವರ ನಿಧನದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಕೊಲ್ಹಾಪುರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.
ನಂತರ ಡಾ. ಡಿ.ವೈ. ಪಾಟೀಲ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸತೇಜ್ (ಬಂಟಿ) ಪಾಟೀಲ ಮತ್ತು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ದುಃಖದ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಹೆಬ್ಬಾಳಕರ್ ಅವರು, ಡಾ. ಪಾಟೀಲ ಅವರ ಅಗಲಿಕೆಯಿಂದ ಉಂಟಾಗಿರುವ ನೋವಿನಲ್ಲಿ ತಾವು ಹಾಗೂ ತಮ್ಮ ಕುಟುಂಬ ಭಾಗಿಯಾಗಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಸರಳತೆ, ಸಜ್ಜನಿಕೆ ಹಾಗೂ ಮಾನವೀಯ ಮೌಲ್ಯಗಳಿಗೆ ಹೆಸರಾಗಿದ್ದ ಡಾ. ಡಿ.ವೈ. ಪಾಟೀಲ ಅವರು ತಮ್ಮ ಜೀವನವನ್ನು ಸಮಾಜ ಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಮುಡಿಪಾಗಿಟ್ಟಿದ್ದರು. ಶಿಕ್ಷಣ, ಸಮಾಜಸೇವೆ, ರಾಜಕೀಯ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ ಹಾಗೂ ಸ್ಮರಣೀಯ” ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಡಾ. ಪಾಟೀಲ ಅವರು ಸಲ್ಲಿಸಿರುವ ಸೇವೆಯನ್ನು ವಿಶೇಷವಾಗಿ ಸ್ಮರಿಸಿದ ಅವರು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಡಾ. ಪಾಟೀಲ ಅವರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿದ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
“ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದ ಡಾ. ಡಿ.ವೈ. ಪಾಟೀಲ ಅವರ ನಿಧನವು ಕೇವಲ ಅವರ ಕುಟುಂಬಕ್ಕೆ ಮಾತ್ರವಲ್ಲ, ಸಾರ್ವಜನಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೂ ತುಂಬಲಾರದ ನಷ್ಟವಾಗಿದೆ. ಅವರ ಸೇವೆ, ಸರಳತೆ ಮತ್ತು ಸಮಾಜಮುಖಿ ಚಿಂತನೆಗಳು ಮುಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಲಿವೆ” ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಡಾ. ಪಾಟೀಲ ಅವರು ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜಕೀಯದ ಜೊತೆಗೆ ಶಿಕ್ಷಣ ಹಾಗೂ ಸಮಾಜಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದ ಅವರು, ಜನಸಾಮಾನ್ಯರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು ಎಂದು ಅವರು ಸ್ಮರಿಸಿದರು.
ಡಾ. ಡಿ.ವೈ. ಪಾಟೀಲ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿದಂತೆ, ಪಾಟೀಲ ಕುಟುಂಬದ ಆಪ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ