ಹಾವೇರಿ: ಬಿಜೆಪಿ ಸಂಪರ್ಕದಲ್ಲಿ ಸುಮಾರು 15-20 ಶಾಸಕರು ಇದಾರೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತ ನೋಡುತ್ತಿರುವ ಸುಮಾರು 15-20 ಜನ ಕಾಂಗ್ರೆಸ್ – ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಮೂಲಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಾತಿಗೆ ಪುಷ್ಟಿ ನೀಡಿದ್ದಾರೆ. ನಿನ್ನೇ ದಿನ 5 ಜನರು ಬಿಜೆಪಿಗೆ ಬರಲು ಸಿದ್ದ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಅವರ ಮಾತು ನಿಜವೆಂಬಂತೆ ಪರೋಕ್ಷವಾಗಿ ಸವದಿ ಒಪ್ಪಿಕೊಂಡಿದ್ದಾರೆ.
ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ. ಆದರೆ ಪಕ್ಷ ಬಿಡುವುದಿಲ್ಲ:ರಮೇಶ್ ಜಾರಕಿಹೊಳಿ…
Laxmi News 24×7 यांनी वर पोस्ट केले शुक्रवार, २९ मे, २०२०
ಬರಿ 5 ಜನ ಶಾಸಕರಲ್ಲ, ಅಲ್ಲಾ 15-20 ಜನರು ನಮ್ಮ ಸಂಪರ್ಕದಲ್ಲಿ ಇದಾರೆ. ವಿವಿಧ ಪಕ್ಷದದಿಂದ ಈಗಾಗಲೇ ನಮ್ಮ ಪಕ್ಷಕ್ಕೆ ಬರಲು ಸಿದ್ದರಿದ್ದಾರೆ. ಅದರ ಬಗ್ಗೆ ನಮ್ಮ ಪಕ್ಷದ ಮುಖಂಡರು ತಿರ್ಮಾನ ಮಾಡಬೇಕು. ಆದರೆ, ನಾವು ಅವರನ್ನತೆಗೆದುಕೋ ಬೇಡವೋ ಎಂದು ಯೋಚಿಸುತ್ತಿದ್ದೆವೆ ಎನ್ನುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳೆಯದಲ್ಲಿ ಮತ್ತೆ ನಡುಕ ಹುಟ್ಟಿಸಿದರು.