Breaking News

ಮಾಂಸಾಹಾರ ತಿಂದು ದೇವಾಲಯಕ್ಕೆ ಹೋದ್ರೆ ತಪ್ಪೇನು..? ಸಿದ್ದರಾಮಯ್ಯ ಆಕ್ರೋಶ

Spread the love

ಚಿಕ್ಕಬಳ್ಳಾಪುರ: ಮಡಿಕೇರಿ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ, ಮಾಂಸ ಆಹಾರ ಸೇವಿಸಿ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಸಿದ್ದರಾಮಯ್ಯ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಊಟದ ಬಗ್ಗೆ ಪ್ರಶ್ನಿಸಲು‌ ನೀವ್ಯಾರು? 
ನಾನು ‌ಊಟ ಮಾಡಿದ್ದು, ಸುದರ್ಶನ್ ಗೆಸ್ಟ್ ಹೌಸ್​ನಲ್ಲಿ. ಸಂಜೆ‌ ನಾನು ಬಸವೇಶ್ವರ ‌ದೇವಾಲಯಕ್ಕೆ ಹೋಗಿರೋದು. ನಾನ್​ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೇನು? ಮಧ್ಯಾಹ್ನ ತಿಂದು ಸಂಜೆ ದೇವಾಲಯಕ್ಕೆ ಹೋದ್ರೆ ತಪ್ಪೇನು? ನನ್ನ ಊಟದ ಬಗ್ಗೆ ಪ್ರಶ್ನಿಸಲು‌ ನೀವ್ಯಾರು? ನಾನು ದಾಳಿ ಮಾಡಲು ಕೊಡಗಿಗೆ ಹೊಗುತ್ತಿಲ್ಲ. ಜನರ ಕಷ್ಟಗಳಿಗ ಸ್ಪಂದಿಸಲು ಹೋಗುತ್ತಿದ್ದೇನೆ ಎಂದಿದ್ದಾರೆ.
ಬಿಜೆಪಿಯವರಿಗೆ ನಮ್ಮ ಏಳಿಗೆ ಸಹಿಸಲು ಆಗುತ್ತಿಲ್ಲ. ಬಿಜೆಪಿಯವರ ತಪ್ಪುಗಳನ್ನು ‌ಮುಚ್ಚಿಡಲು ಈ ರೀತಿಯ ಅಪಪ್ರಚಾರಕ್ಕೆ ಮುಂದಾಗುತ್ತಿದ್ದಾರೆ. ಜನೋತ್ಸವ ಅಲ್ಲ, ಅದು ಭ್ರಷ್ಟೋತ್ಸವ ಎಂದು‌ ಲೇವಡಿ ಮಾಡಿದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ