!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಈರನಹಟ್ಟಿ ಗ್ರಾಮದ ಶ್ರೀ ಏಳುಮುಖ ದೇವಿ ದೇವಸ್ಥಾನ ಹಾಗೂ ಶ್ರೀ ಬಸವೇಶ್ವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ತವಗಮಠದ ಶ್ರೀ ಸಿದ್ದಲಿಂಗಯ್ಯ ಸ್ವಾಮಿಜೀ (ಬಾಳಯ್ಯ ಅಜ್ಜಾರ) ಹಾಗೂ ಮುಖಂಡರಾದ ಅಡಿವೆಪ್ಪ ಹಟ್ಟಿಗೌಡರ, ಬಸವಣ್ಣಿ ಕಾರಿ, ನೀಲಕಂಠ ಎಳಲಿ, ಮಲ್ಲಿಕಾರ್ಜುನ ದುಳಾಯಿ, ಸಂತೋಷ ಮುಸವಗೋಳ, ಈರಪ್ಪಾ ಶಿಂದಿಹಟ್ಟಿ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.
ದಿನಾಂಕ 20/01/2024