Breaking News
Home / ರಾಜಕೀಯ / ದೇವರ ವಿಗ್ರಹ ವಿರೂಪಗೊಳಿಸಿದ ಪ್ರಕರಣ; ಕೊನೆಗೂ ನಾಲ್ವರು ಅರೆಸ್ಟ್

ದೇವರ ವಿಗ್ರಹ ವಿರೂಪಗೊಳಿಸಿದ ಪ್ರಕರಣ; ಕೊನೆಗೂ ನಾಲ್ವರು ಅರೆಸ್ಟ್

Spread the love

ಹಾಸನ: ಐತಿಹಾಸಿಕ ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿಯ ದೇವರ ವಿಗ್ರಹಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿರುವ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ವಿರೂಪಗೊಳಿಸಿರುವ ಪ್ರಕರಣ ಮೇ 31 ರಂದು ಬೆಳಕಿಗೆ ಬಂದಿತ್ತು. ಬೆಟ್ಟದ ಈಜುಕೊಳ ಹಿಂಭಾಗ, ಶ್ರೀನಿವಾಸ ಕಲ್ಯಾಣ ಮ್ಯೂಸಿಯಂ ನಿರ್ಮಾಣಕ್ಕೆಂದು ಹಲವು ವಿಗ್ರಹಗಳನ್ನು ಕೆತ್ತನೆ ಮಾಡಿ ಇಡಲಾಗಿತ್ತು. ಈ ವಿಗ್ರಹಗಳನ್ನ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು.

ಮೂವರು ಅಪ್ರಾಪ್ತರು ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ