Breaking News

ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಮಸಿ ಬಳಿದ ಕನ್ನಡ ಕಾರ್ಯಕರ್ತ ಸಂಪತ್ ಕುಮಾರ ದೇಸಾಯಿವಿರುದ್ಧ ಕೊಲೆ ಯತ್ನ (ಸೆ.307) ಪ್ರಕರಣವನ್ನು ದಾಖಲಿಸಿದ ಪೋಲೀಸರ ವಿರುದ್ಧ ಕ್ರಮಕೈಕೊಳ್ಳಬೇಕು

Spread the love

ಬೆಳಗಾವಿ –  ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಮಸಿ ಬಳಿದ ಕನ್ನಡ ಕಾರ್ಯಕರ್ತ ಸಂಪತ್ ಕುಮಾರ ದೇಸಾಯಿವಿರುದ್ಧ ಕೊಲೆ ಯತ್ನ (ಸೆ.307) ಪ್ರಕರಣವನ್ನು
ದಾಖಲಿಸಿದ ಪೋಲೀಸರ ವಿರುದ್ಧ ಕ್ರಮಕೈಕೊಳ್ಳಬೇಕು ಹಾಗೂ ಪ್ರಕರಣವನ್ನು
ವಾಪಸ್ ಪಡೆಯಬೇಕೆಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.
ರಾಜ್ಯ ಗೃಹಸಚಿವ ಅರಗ ಙ್ಞಾನೇಂದ್ರ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿದ ಕ್ರಿಯಾ ಸಮಿತಿ ನಿಯೋಗ, ಈ ಸಂಬಂಧ ಮನವಿಯನ್ನು ಸಲ್ಲಿಸಿತು.
ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿರುವ ಪೋಲೀಸರ ವಿರುದ್ಧ ಕ್ರಮ ಕೈಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕನ್ನಡ ಹೋರಾಟಗಾರ ಸಾಗರ್ ಬೋರಗಲ್ಲ, ರಜತ್ ಅಂಕಲೆ,
ಆನಂದ ಹುಲಬತ್ತೆ ಹಾಗೂ ವಿರೇಂದ್ರ ಗೋಬರಿ ಇದ್ದರು.
 ಈ ಸಂಬಂಧ ಪರಿಶೀಲಿಸಿ ಕ್ರಮ ಕೈಕೊಳ್ಳುವುದಾಗಿ ಗೃಹಸಚಿವರು ಭರವಸೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಈ ಸಂದರ್ಭದಲ್ಲಿದ್ದರು.

Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ