Breaking News

ಮರಾಠ ಹಾಗೂ ಕನ್ನಡಿಗರ ನಡುವೆ ಭಾಷಾ ಧ್ವೇಷ ಮೂಡಿಸಲು ಶಿವ ಸೇನೆ ಪುಂಡರು ಯತ್ನ

Spread the love

ಹುಕ್ಕೇರಿ :  ತಾಲ್ಲೂಕಿನಲ್ಲಿ ಮನಗುತ್ತಿಯಲ್ಲಿ ಸ್ಥಾಪಿಸಿದ್ದ ಶಿವಾಜಿ ಮೂರ್ತಿ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಶಿವ ಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೊಣ್ಣೆಗಳಿಂದ ಬಡಿದಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಮನಗುತ್ತಿ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಸಮೀಪ ಸ್ಥಾಪಿಸಿರುವ ಶಿವಾಜಿ ಮೂರ್ತಿಯೂ ಗ್ರಾಮ ದೇವತೆ ಜಾತ್ರೆಗೆ ಸಮಸ್ಯೆಯಾಗುತ್ತದೆ ಎಂದು ಗ್ರಾಮದ ಹಿರಿಯರು, ಮುಖಂಡರು ಒಮ್ಮತದಿಂದ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಮ್ಮತಿಸಿರುತ್ತಾರೆ. ಆದರೆ ಇದನ್ನೇ ಮಹಾರಾಷ್ಟ್ರ ಶಿವ ಸೇನೆ ಕಾರ್ಯಕರ್ತರು ಮೂರ್ತಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತ ಪಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು.

ಮಹಾರಾಷ್ಟ್ರದಿಂದ ಗ್ರಾಮಕ್ಕೆ ಆಗಮಿಸಿದ  ಶಿವಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಆರಂಭವಾಗುವ ಮೂಲಕ ದೊಣ್ಣೆಗಳಿಂದ ಬಡಿದಾಡಿದ ಘಟನೆ ನಡೆದಿದೆ.  ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸಹ ಸ್ಥಳದಲ್ಲಿಯೇ ಬಿಡು ಬಿಟ್ಟಿದ್ದಾರೆ.

ಮರಾಠ ಹಾಗೂ ಕನ್ನಡಿಗರ ನಡುವೆ ಭಾಷಾ ಧ್ವೇಷ ಮೂಡಿಸಲು ಶಿವ ಸೇನೆ ಪುಂಡರು ಯತ್ನಿಸಿದ್ದಾರೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ