ಹುಕ್ಕೇರಿ : ತಾಲ್ಲೂಕಿನಲ್ಲಿ ಮನಗುತ್ತಿಯಲ್ಲಿ ಸ್ಥಾಪಿಸಿದ್ದ ಶಿವಾಜಿ ಮೂರ್ತಿ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಶಿವ ಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೊಣ್ಣೆಗಳಿಂದ ಬಡಿದಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಮನಗುತ್ತಿ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಸಮೀಪ ಸ್ಥಾಪಿಸಿರುವ ಶಿವಾಜಿ ಮೂರ್ತಿಯೂ ಗ್ರಾಮ ದೇವತೆ ಜಾತ್ರೆಗೆ ಸಮಸ್ಯೆಯಾಗುತ್ತದೆ ಎಂದು ಗ್ರಾಮದ ಹಿರಿಯರು, ಮುಖಂಡರು ಒಮ್ಮತದಿಂದ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಮ್ಮತಿಸಿರುತ್ತಾರೆ. ಆದರೆ ಇದನ್ನೇ ಮಹಾರಾಷ್ಟ್ರ ಶಿವ ಸೇನೆ ಕಾರ್ಯಕರ್ತರು ಮೂರ್ತಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತ ಪಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು.
ಮಹಾರಾಷ್ಟ್ರದಿಂದ ಗ್ರಾಮಕ್ಕೆ ಆಗಮಿಸಿದ ಶಿವಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಆರಂಭವಾಗುವ ಮೂಲಕ ದೊಣ್ಣೆಗಳಿಂದ ಬಡಿದಾಡಿದ ಘಟನೆ ನಡೆದಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸಹ ಸ್ಥಳದಲ್ಲಿಯೇ ಬಿಡು ಬಿಟ್ಟಿದ್ದಾರೆ.
ಮರಾಠ ಹಾಗೂ ಕನ್ನಡಿಗರ ನಡುವೆ ಭಾಷಾ ಧ್ವೇಷ ಮೂಡಿಸಲು ಶಿವ ಸೇನೆ ಪುಂಡರು ಯತ್ನಿಸಿದ್ದಾರೆ.