ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡುತ್ತಿದ್ದಾರೆ. ಇಲ್ಲಿ ಲಾಕ್ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡುತ್ತಿದ್ದಾರೆ. ನಮಗೂ ಲಾಕ್ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದ್ದಾರೆ.