Breaking News

ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ: ಆರ್‌ಬಿಐ ತಾಕೀತು

Spread the love

ಮುಂಬೈ: ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಾಕೀತು ಮಾಡಿದೆ. ಅಲ್ಲದೆ, ವಸೂಲಿ ಏಜೆಂಟರು ಸಾಲಗಾರರಿಗೆ ಬೆಳಿಗ್ಗೆ 8 ಗಂಟೆಯ ಮೊದಲು ಹಾಗೂ ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಕೂಡ ಹೇಳಿದೆ.

 

ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಆಸ್ತಿ ಪುನರ್‌ರಚನಾ ಕಂಪನಿಗಳಿಗೆ (ಎಆರ್‌ಸಿ) ಈ ಹೆಚ್ಚುವರಿ ಸೂಚನೆಗಳು ಅನ್ವಯವಾಗುತ್ತವೆ. ಸಾಲದ ವಸೂಲಾತಿಗೆ ಸಂಬಂಧಿಸಿದಂತೆ ತಾನು ನೀಡಿದ್ದ ಸೂಚನೆಗಳನ್ನು ಏಜೆಂಟರು ಪಾಲಿಸುತ್ತಿಲ್ಲ ಎಂದು ಆರ್‌ಬಿಐ ಹೇಳಿದೆ.

ಈ ಸೂಚನೆಗಳು ಎಲ್ಲ ವಾಣಿಜ್ಯ ಬ್ಯಾಂಕ್‌ಗಳಿಗೆ (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೇರಿದಂತೆ), ಸಹಕಾರ ಬ್ಯಾಂಕ್‌ಗಳಿಗೆ ಕೂಡ ಅನ್ವಯವಾಗುತ್ತವೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ

Spread the love ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ