Breaking News

ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದರು; ಸ್ಥಳದಲ್ಲೇ ಸಾವಿಗೀಡಾದ ದಂಪತಿ

Spread the love

ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು.

ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು ಮೂಲದ ಕ್ಯಾಂಟರ್​ ಈ ದಂಪತಿ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಅಪ್ಪಳಿಸಿದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ