Breaking News

ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ H.D.K. ಆರ್‌ಎಸ್‌ಎಸ್‌ ವಿರುದ್ಧ ಟೀಕೆ: ಜೋಶಿ

Spread the love

ಧಾರವಾಡ: ‘ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ನಾವು ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯದ ವಿರೋಧಿಗಳಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಾಂದ್ರಕ ಘಟಕಕ್ಕೆ ಶನಿವಾರ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮುಗ್ಧ ಮುಸ್ಲಿಮರ ಮತಕ್ಕಾಗಿ ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ಭೂತದಂತೆ ಇವರು ತೋರಿಸುತ್ತಿದ್ದಾರೆ. ಇವರ ಎಲ್ಲಾ ಮತ ಬ್ಯಾಂಕುಗಳು ಕಡಿಮೆಯಾಗುತ್ತಿರುವುದರಿಂದ ಈ ತಂತ್ರ ಹೂಡಿದ್ದಾರೆ’ ಎಂದು ಟೀಕಿಸಿದರು.

ದಾವಣಗೆರೆ: ‘ಆರ್‌.ಎಸ್‌.ಎಸ್‌ ಬಗ್ಗೆ ಗಂಧಗಾಳಿಯೂ ಗೊತ್ತಿಲ್ಲದ ಎಚ್.ಡಿ. ಕುಮಾರಸ್ವಾಮಿ ಯಾವುದೋ ಪುಸ್ತಕ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ. ಇದು ಕುರುಡ ಆನೆಯ ಬಾಲ ಹಿಡಿದು, ಅದೇ ಆನೆ ಸೊಂಡಿಲು ಅಂದುಕೊಂಡಂತೆ ಆಗಿದೆ’ ಎಂದು ಸಚಿವ ಆರ್.ಅಶೋಕ ಅವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ