ನವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.
ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್ಇಟಿಯನ್ನ ಉಗ್ರ ಸಂಘಟನೆ ಎಂದು ಘೋಷಣೆ ಮಾಡುವುದಕ್ಕೆ ಇಸ್ರೇಲ್ ಸರ್ಕಾರ ಎಲ್ಲಾ ಸಿದ್ಧತೆ ನಡೆಸಿದೆ. ಭಾರತ ಸರ್ಕಾರದ ಯಾವುದೇ ಮನವಿಯನ್ನ ಸ್ವೀಕರಿಸಿದೆ ಇಸ್ರೇಲ್ ಸರ್ಕಾರ ಸ್ವತಂತ್ರವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಗಮನಾರ್ಹ.
ಮುಂಬೈ ದಾಳಿ ಕರಾಳತೆ ಇನ್ನೂ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ
” ನಾವು ಲಷ್ಕರ್-ಎ-ತೊಯ್ಬಾವನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿ ಸೇರಿಸಿದ್ದೇವೆ. ಇದಕ್ಕಾಗಿ ಭಾರತ ಸರ್ಕಾರದಿಂದ ಯಾವುದೇ ಮನವಿ ಬಂದಿಲ್ಲವಾದರೂ ಇಸ್ರೇಲ್ ಈ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದೇವೆ. ಲಷ್ಕರ್-ಎ-ತೊಯ್ಬಾ ಭಯಾನಕ ಭಯೋತ್ಪಾದಕ ಸಂಘಟನೆಯಾಗಿದೆ. ಈ ಸಂಘಟನೆ ಭಾರತೀಯ ನಾಗರಿಕರ ಜೊತೆಗೆ ನೂರಾರು ಜನರನ್ನು ಅಪಹರಿಸಲಾಗಿದೆ. ನವೆಂಬರ್ 26, 2008 ರಂದು ಈ ಸಂಘಟನೆಯ ಭಯೋತ್ಪಾದನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ ” ಎಂದು ಇಸ್ರೇಲಿ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.