Breaking News
Home / ರಾಜಕೀಯ / ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Spread the love

ಮುಗಿಲ್​ಪೇಟೆ’ ಸಿನಿಮಾದಲ್ಲಿ ಮನುರಂಜನ್​ ಮತ್ತು ಸಾಧುಕೋಕಿಲ ನಡುವಿನ ದೃಶ್ಯಗಳು ರವಿಚಂದ್ರನ್​ ಅವರ ಗಮನ ಸೆಳೆದಿವೆ. ಆ ಬಗ್ಗೆ ಅವರು ಮಾತನಾಡಿದ್ದಾರೆ.ಮನುರಂಜನ್​ ರವಿಚಂದ್ರನ್​ ನಟನೆಯ ‘ಮುಗಿಲ್​ಪೇಟೆ’ ಚಿತ್ರ ಬಿಡುಗಡೆ ಆಗಿದೆ. ಪ್ರೇಕ್ಷಕರು ಈ ಸಿನಿಮಾ ನೋಡಿ ಇಷ್ಟಪಟ್ಟಿದ್ದಾರೆ.

ಅದೇ ರೀತಿ, ‘ಕ್ರೇಜಿ ಸ್ಟಾರ್​’ ರವಿಚಂದ್ರನ್ ಅವರು ಕೂಡ ‘ಮುಗಿಲ್​ಪೇಟೆ’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮನುರಂಜನ್​ ಮತ್ತು ಸಾಧುಕೋಕಿಲ ನಡುವಿನ ದೃಶ್ಯಗಳು ರವಿಚಂದ್ರನ್​ ಅವರ ಗಮನ ಸೆಳೆದಿವೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ‘ಸಾಧುಕೋಕಿಲ ಅವರ ಪಾತ್ರ ಈ ಸಿನಿಮಾದಲ್ಲಿ ಚೆನ್ನಾಗಿ ಮೂಡಿಬಂದಿದೆ. ಸಿನಿಮಾದಲ್ಲಿ ಅವರು ನನಗೆ ಸಿಕ್ಕಿದ್ದರೆ ಅವರಿಗೆ ಒಂದೆರಡು ಏಟು ಇನ್ನೂ ಚೆನ್ನಾಗಿ ಬಿದ್ದಿರುತ್ತಿತ್ತು. ಸರಿಯಾಗಿ ಒದೆಯುತ್ತಿದ್ದೆ. ನನ್ನ ಮಗನಿಗೆ ಹೊಡೆಯೋಕೆ ಬಂದಿಲ್ಲ. ಸಾಧು ಎಷ್ಟು ಒದೆ ತಿನ್ನುತ್ತಾರೋ ಸಿನಿಮಾ ಅಷ್ಟು ಚೆನ್ನಾಗಿ ಇರುತ್ತದೆ. ಸಾಕಷ್ಟು ಗೆಟಪ್​ಗಳನ್ನು ಹಾಕಿಕೊಂಡು ಇಡೀ ಸಿನಿಮಾವನ್ನು ತಮಾಷೆಯಾಗಿ ಕಟ್ಟಿಕೊಡಲು ಅವರ ಪಾತ್ರ ಮುಖ್ಯವಾಗಿದೆ’ ಎಂದು ರವಿಚಂದ್ರನ್​ ಹೇಳಿದ್ದಾರೆ. ಈ ಚಿತ್ರದಲ್ಲಿ ಮನುರಂಜನ್​ಗೆ ಜೋಡಿಯಾಗಿ ಹೊಸ ನಟಿ ಖಯಾದು ಲೋಹರ್​ ಅಭಿನಯಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ