Breaking News

ಜಾಮೀನು ಸಿಕ್ಕರೂ ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್

Spread the love

ಸಂಧ್ಯಾ ಥಿಯೇಟರ್‌ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಅವರು ಬಿಡುಗಡೆಯಾಗಿದ್ದಾರೆ.
ಈ ಘಟನೆಯಿಂದ ಟಾಲಿವುಡ್‌ನಲ್ಲಿ ಆಕ್ರೋಶ ಹಾಗೂ ಚರ್ಚೆಗಳು ಹೆಚ್ಚಿವೆ. ಅಲ್ಲು ಅರ್ಜುನ್ ಅವರ ಬಂಧನವು ಅಭಿಮಾನಿಗಳಲ್ಲಿ ಕೋಪವನ್ನು ಹುಟ್ಟುಹಾಕಿದೆ.ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ (ಡಿಸೆಂಬರ್ 13) ಬಂಧನ ಮಾಡಲಾಯಿತು.
ಈ ಬಂಧನದಿಂದ ಇಡೀ ಟಾಲಿವುಡ್​ನಲ್ಲಿ ಸಂಚಲನ ಸೃಷ್ಟಿ ಆಗಿದೆ. ಕೆಳ ಹಂತದ ಕೋರ್ಟ್​ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿದೆ. ಬನ್ನಿ ರಾತ್ರಿಯಿಡೀ ಜೈಲಿನಲ್ಲೇ ಕಳೆದಿದ್ದಾರೆ. ಮುಂಜಾನೆ ಅವರು ಬಿಡುಗಡೆ ಹೊಂದಿದ್ದಾರೆ.

Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ