Breaking News

ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿಎಸ್ಪಿ ಗೆ ಗಂಭೀರ ಗಾಯ

Spread the love

ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್​ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

 

ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್​ ಲಾರಿಗೆ ಗುದ್ದಿದ ರಭಸಕ್ಕೆ ​ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ