Breaking News

ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿಎಸ್ಪಿ ಗೆ ಗಂಭೀರ ಗಾಯ

Spread the love

ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್​ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

 

ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್​ ಲಾರಿಗೆ ಗುದ್ದಿದ ರಭಸಕ್ಕೆ ​ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ