Breaking News

ಊಟಕ್ಕೆಂದು ಹೋದವರು ವಾಪಸ್​ ಬಂದದ್ದು ಹೆಣವಾಗಿ. ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?

Spread the love

ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.

ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು.

ಬೆಂಗಳೂರಿನ ಸಾರಕ್ಕಿ‌ ನಿವಾಸಿಗಳಾದ ಇವರಿಬ್ಬರೂ ಊಟ ಮಾಡಲೆಂದು ಬುಧವಾರ ರಾತ್ರಿ ಬನ್ನೇರುಘಟಕ್ಕೆ ಬೈಕ್​ನಲ್ಲಿ ಹೋಗಿದ್ದರು.

ಊಟ ಮುಗಿಸಿ ವಾಪಸ್ ಬರುವ ವೇಳೆ ಬೈಕ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೌಶಿಕ್​ ಮತ್ತು ಸುಷ್ಮಾ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಪಘಾತ ಸಂಭವಿಸುತ್ತಿದ್ದಂತೆ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು ಕೊಟ್ಟ ಪೊಲೀಸರು

Spread the loveಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್​ ಲಾರಿಯನ್ನು ಬೆನ್ನಟ್ಟಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ