ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್ ಲಾರಿಗೆ ಗುದ್ದಿದ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.