ಬೆಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಮೊದಲು ನನ್ನ ಗಾಡಿಗೆ ಪೆಟ್ರೋಲ್ ಹಾಕಬೇಕೆಂದು ಹಲ್ಲೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ಹಂಚಿಪುರದ ಪುಂಡರಿಂದ ಈ ಹಲ್ಲೆ ನಡೆದಿದೆ.
ಪೆಟ್ರೋಲ್ ಬಂಕ್ ನಲ್ಲಿ ತುಂಬಾ ಕ್ಯೂ ಇತ್ತು. ಕಾರಣ ಕ್ಯೂನಲ್ಲಿ ಬರದೆ ನನ್ನ ಗಾಡಿಗೆ ಪೆಟ್ರೋಲ್ ಹಾಕಬೇಕೆಂದು ಹಂಚಿಪುರದ ಡೈರಿ ರಾಮಚಂದ್ರಪ್ಪನ ಮಗ ಗುಣ ಎಗರಾಡಿದ್ದನಂತೆ. ಆ ಬಳಿಕ ಮಾತಿಗೆ ಮಾತು ಬೆಳೆದು ಗುಣನಿಂದ ಹಲ್ಲೆ ನಡೆದಿದ್ದು, ಗುಣನ ಜೊತೆಗೆ ಬಿಎಂಟಿಸಿ ಡ್ರೈವರ್ ಮೂರ್ತಿ ಎಂಬಾತ ಸಾಥ್ ಕೊಟ್ಟಿದ್ದಾನೆ.
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಸ್ಎಲ್ಆರ್ ಬಂಕ್ ನ ಸಿಬ್ಬಂದಿ ವೆಂಕಟೇಶ್ ಹಲ್ಲೆಗೊಳಗಾದ ವ್ಯಕ್ತಿ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಗುಣ ಮತ್ತು ಸ್ನೇಹಿತರನ್ನು ವೆಂಕಟೇಶ್ ಪ್ರಶ್ನೆ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿದ್ದಾನೆ. ಸಿಸಿಟಿವಿ ಸಮೇತ ನೆಲಮಂಗಲ ಠಾಣೆಗೆ ದೂರು ನೀಡಲಾಗಿದೆ.