Breaking News

ಸಿಎಂ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ‌ಮೇಜರ್ ಸರ್ಜರಿ!

Spread the love

ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ‌ಮೇಜರ್ ಸರ್ಜರಿ ಆಗಲಿದೆ. ನಗರ ಪೊಲೀಸ್ ಆಯುಕ್ತ ಸ್ಥಾನಕ್ಕೇರಲು ನಾಲ್ವರು ಅಧಿಕಾರಿಗಳು ರೇಸ್​ ನಲ್ಲಿದ್ದಾರೆ.

ಆಗಸ್ಟ್​ಗೆ ಪೊಲೀಸ್ ಆಯುಕ್ತರ ಅಧಿಕಾರ ಅವಧಿ ಅಂತ್ಯಗೊಳ್ಳಲಿದೆ. ಹೀಗಾಗಿ ಮುಂದಿನ ಪೊಲೀಸ್ ಆಯುಕ್ತರ ಹುದ್ದೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರತಾಪ್ ರೆಡ್ಡಿ, ಗುಪ್ತಚರ ವಿಭಾಗದ ಬಿ. ದಯಾನಂದ್, ಪೊಲೀಸ್ ತರಬೇತಿ ವಿಭಾಗದ ಅಮೃತ್ ಪೌಲ್, ರಾಜ್ಯ ಆಡಳಿತ ವಿಭಾಗದ ಎಡಿಜಿಪಿ ಎಂಎ ಸಲೀಂ ನಡುವೆ ಪೈಪೋಟಿ ಏರ್ಪಟಿದೆ. ಈ ಪೈಕಿ ಕನ್ನಡಿಗರಾದ ಸಲೀಂ ಮತ್ತು ದಯಾನಂದ್ ನಡುವೆ ತೀವ್ರ ಪೈಪೋಟಿ ಇದೆ ಎನ್ನಲಾಗಿದ್ದು, ಬಿ.ದಯಾನಂದ್ ಕಮಿಷನರ್ ಆಗುವ ಸಾಧ್ಯತೆ‌ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಸಿಟಿ ಡಿಸಿಪಿಗಳಲ್ಲೂ ಬದಲಾವಣೆ ಆಗುವ ಸಾಧ್ಯತೆ ಇದೆ. ಒಂದು ವರ್ಷ ತುಂಬದ ಇಬ್ಬರನ್ನು ಬಿಟ್ಟು ಎಲ್ಲರೂ ಬದಲಾವಣೆ ಮಾಡಲಾಗುತ್ತೆ. ಸೌತ್ ಮತ್ತು ನಾರ್ತ್ ಮಾತ್ರ ಕಂಟಿನ್ಯೂ ಆಗುವ ಸಾಧ್ಯತೆ ಇದ್ದು, ಉಳಿದ ಆರು ಡಿವಿಷನ್ ಬದಲಾವಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ. 6ರಲ್ಲಿ ಕೆಲವರು ಅಲ್ಲೇ ಉಳಿಯಲು ಕಸರತ್ತು ನಡೆಸಿದ್ದಾರೆ. ಒಟ್ಟಿನಲ್ಲಿ ಸಿಎಂ ಬದಲಾವಣೆ ನಗರ ಪೊಲೀಸ್ ‌ಇಲಾಖೆಯಲ್ಲಿ ಸಂಚಲನ ಸೃಷ್ಟಿ ಖಚಿತ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ