Breaking News

ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!

Spread the love

ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್‌ ಶುಲ್ಲೈ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ.

ಕಳೆದವಾರವಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕ ಶುಲ್ಲೈ, ‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿರುವ ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರವನ್ನು ಸೇವಿಸಲು ಸ್ವತಂತ್ರರು ಎಂದು ಹೇಳಿದ್ದಾರೆ.

ನೆರೆಯ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಆ ಹೊಸ ಕಾನೂನಿಂದ ಮೇಘಾಲಯಕ್ಕೆ ಜಾನುವಾರ ಸಾಗಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ