Breaking News

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

 

ಬಿದ್ದ ಮನೆಯಲ್ಲೇ ಎರಡು ದಿನದಿಂದ ಜೀವನ ಸಾಗಿಸುತ್ತಿರುವ ಬಾಲಕಿ ನಿಸರ್ಗ ಕುಟುಂಬದ ಅಳಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ತಲುಪಿದೆ. ಡಿಸಿ ಎಂ.ಜಿ ಹಿರೇಮಠಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಹಸೀಲ್ದಾರಗೆ ಸ್ಥಳಕ್ಕೆ ತೆರಳಿ ಬಾಲಕಿ ಕುಟುಂಬಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ