Breaking News

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

Spread the love

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಕುಖ್ಯಾತ ರೌಡಿ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ