ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ಗಳಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ 63 ರೌಡಿಶೀಟರ್ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಕುಖ್ಯಾತ ರೌಡಿ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆದಿದೆ.