Breaking News

ಮಂಗಗಳ ಮಾರಣ ಹೋಮ ಪ್ರಕರಣ; 40 ಸಾವಿರಕ್ಕೆ ಗುತ್ತಿಗೆ ಪಡೆದು ಕೃತ್ಯವೆಸಗಿದ್ದ ಪಾಪಿಗಳು

Spread the love

ಹಾಸನ: ಮಂಗಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಸನದ ಉಗಾನೆ ಗ್ರಾಮದ ಪ್ರಸನ್ನ, ರುದ್ರೇಗೌಡ, ಚಾಲಕ ಮಂಜು, ಮಂಗಗಳನ್ನು ಸೆರೆ ಹಿಡಿದಿದ್ದ ಯಶೋಧ, ರಾಮು ದಂಪತಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಬೆಳೆ ಹಾನಿ ಮಾಡುತ್ತಿವೆ ಎಂದು ಕೋತಿಗಳ ಸೆರೆ ಹಿಡಿಯಲು ಜಮೀನಿನ ಮಾಲೀಕ ಪ್ರಸನ್ನ, ರುದ್ರೇಗೌಡ ಅವರು ಯಶೋಧ ಹಾಗೂ ರಾಮು ದಂಪತಿಗೆ 40 ಸಾವಿರಕ್ಕೆ ಗುತ್ತಿಗೆ ನೀಡಿದ್ದರು. ಆಹಾರದ ಆಸೆ ತೋರಿಸಿ ಯಶೋಧ ಹಾಗೂ ರಾಮು ಕೋತಿಗಳನ್ನು ಸೆರೆಹಿಡಿದು ಅವುಗಳನ್ನು ಸಾಯಿಸಿದ್ದರು. ಬಳಿಕ ಚೀಲದಲ್ಲಿ ಮಂಗಗಳನ್ನು ತುಂಬಿ ಬೇಲೂರು ತಾಲೂಕು ಚೌಡನಹಳ್ಳಿ ಬಳಿ ರಸ್ತೆಬದಿ ಬಿಸಾಕಿ ಹೋಗಿದ್ದರು. ಕೆಲ ಯುವಕರ ಗುಂಪು ರಸ್ತೆ ಬದಿ ಚೀಲವನ್ನು ಬಿಚ್ಚಿ ನೋಡಿದಾಗ ಮಂಗಗಳನ್ನು ಸಾಯಿಸಿ ತಂದು ಹಾಕಿರುವುದು ಗೊತಾಗಿತ್ತು. ಕೆಲ ಮಂಗಗಳು ಜೀವನ್ಮರಣದ ನಡುವೆ ಹೋರಾಡುತ್ತಿದ್ದರೆ 38 ಮಂಗಗಳು ಸಾವನ್ನಪ್ಪಿದ್ದವು.


Spread the love

About Laxminews 24x7

Check Also

ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!

Spread the loveಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ