Breaking News
Home / ರಾಜಕೀಯ / ದೆಹಲಿಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ

ದೆಹಲಿಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ

Spread the love

ನವದೆಹಲಿ:ದೆಹಲಿಯಲ್ಲಿ 10 ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ.ಹಿರಿಯ ಸಚಿವರಿಗೆ ಟೆನ್ಷನ್ ಶುರುವಾಗಿದೆ.ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ಹಿರಿಯ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ.ಅಶೋಕ್, ಉಮೇಶ್ ಕತ್ತಿ ಬಳಿಕ ಈಗ ಲಕ್ಷ್ಮಣ್, ಸವದಿ, ಸಿಸಿ ಪಾಟೀಲ್ ಹಾಗೂ ರಾಮುಲು ದೆಹಲಿಗೆ ತೆರಳಲಿದ್ದಾರೆ.

ಸತೀಶ್ ರೆಡ್ಡಿ ವಲ್ಯಾಪುರೆ ಸಹಿತ ಹಲವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ.ಸಂಪುಟದಿಂದ ನಮ್ಮನ್ನೆಲ್ಲಿ ಕೈಬಿಡುತ್ತಾರೋ ಎಂಬ ಆತಂಕದಲ್ಲಿ ಹಲವಾರು ಸಚಿವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ.ಹೊಸ ಶಾಸಕರು ತಮಗೆ ಮಂತ್ರಿ ಪದವಿ ಸಿಗಲಿ ಎಂದು ಭೇಟಿಯಾಗಿದ್ದರೆ, ಇನ್ನೂ ಮಾಜಿ ಸಚಿವರು ತಮ್ಮಲ್ಲೇ ಮಂತ್ರಿಸ್ಥಾನ ಇರಲಿ ಎಂದು ಲಾಬಿ ಮಾಡುತ್ತಿದ್ದಾರೆ. ಸಂಜೆ ಹೊತ್ತಿಗೆ ಸಿಎಂ ರ ಕ್ಯಾಬಿನೆಟ್ ಲೀಸ್ಟ್ ಫೈನಲ್ ಗೆ ತಲುಪಲಿದೆ.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ