ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ ಕೂಗುತ್ತ, ಈ ಬಾರಿ ಸಚಿವಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.