Breaking News

ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

Spread the love

ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಯೊಬ್ಬರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು.

ಇಲ್ಲಿನ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡರ ಎನ್ನವವರು ದೀರ್ಘ ದಂಡ ನಮಸ್ಕಾರ ಸೇವೆ ಸಲ್ಲಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥನೆ ಮಾಡಿದರು. ಅರವಿಂದ ಬೆಲ್ಲದ ಅವರು ಈ ಭಾಗದ ಅಭಿವೃದ್ಧಿಗೆ ಸೂಕ್ತ ವ್ಯಕ್ತಿಯಾಗಿದ್ದಾರೆ.

ವಿಶೇಷ ಹಾಗೂ ವಿನೂತನ ಯೋಜನೆಗಳನ್ನು ಮಹಾನಗರಕ್ಕೆ ಪರಿಚಯಿಸಿದ್ದಾರೆ. ಈ ಭಾಗದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬೆಲ್ಲದ ಪರ ಘೋಷಣೆ ಕೂಗಿದರು


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ