ಗುಂಡ್ಲುಪೇಟೆ: ಸಿಎಂ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬೊಮ್ಮಲಾಪುರ ರವಿ ಅವರ ಕುಟುಂಬದವರಿಗೆ ಯಡಿಯೂರಪ್ಪ ಅವರು ಶುಕ್ರವಾರ ಸಾಂತ್ವನ ಹೇಳಿ ವೈಯಕ್ತಿಕವಾಗಿ 5 ಲಕ್ಷ ರೂ. ನೆರವು ನೀಡಿದರು.
ರವಿ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವನ ಹೇಳಿದರು. ಮನೆಯವರು ಸಂಕಷ್ಟದಲ್ಲಿರುವುದನ್ನು ಅರಿತು ಮನೆ ನಿರ್ಮಾಣಕ್ಕೂ ಮುಂದೆ 5 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ ನೀಡಿದರು.
ಗುಂಡ್ಲುಪೇಟೆಗೆ ಹೆಲಿಕಾಪ್ಟರ್ ಮುಖಾಂತರ ಆಗಮಿಸಿದ್ದ ಬಿಎಸ್ವೈ ಅವರೊಂದಿಗೆ ಪುತ್ರ ಬಿ.ವೈ.ವಿಜಯೇಂದ್ರ, ಶಾಸಕರಾದ ಸಿ.ಎಸ್.ನಿರಂಜನ್ ಕುಮಾರ್, ಎನ್.ಮಹೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಎಸ್.ಆರ್.ವಿಶ್ವನಾಥ್, ಕಾ.ಪು.ಸಿದ್ದಲಿಂಗಸ್ವಾಮಿ ಮೊದಲಾದವರಿದ್ದರು.