Breaking News

2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ

Spread the love

ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಮೈಸೂರು: ಇತ್ತೀಚಿಗೆ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೈಸೂರಿನ 11 ವಿದ್ಯಾರ್ಥಿಗಳು ತಿರಸ್ಕರಿಸಿದ್ದು, ಪೂರಕ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಅಧಿಕೃತ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ. ನಿರೀಕ್ಷೆಯಷ್ಟು ಅಂಕ ಬಂದಿಲ್ಲ, ಫಲಿತಾಂಶ ತೃಪ್ತಿದಾಯಕವಲ್ಲ ಎಂದು ಈ ಹಿಂದೆ ನೀಡಲಾಗಿದ್ದ ಫಲಿತಾಂಶವನ್ನು ತಿರಸ್ಕರಿಸಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಆಗಸ್ಟ್ ಕೊನೆಯ ವಾರದಲ್ಲಿ ಪಿಯು‌ ಪೂರಕ ಪರೀಕ್ಷೆ ನಡೆಯಲಿದೆ.

ಎಸ್‌ಎಸ್‌ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿತ್ತು. ಈ 11 ವಿದ್ಯಾರ್ಥಿಗಳ ಜತೆ ಕಳೆದ ವರ್ಷದ 6 ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಮೈಸೂರು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ