ಚೆನ್ನೈ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಈ ಬಾರಿ ಕೊರೊನಾ ವೈರಸ್ ಕಾಟದಿಂದ ಜನ ಹಬ್ಬಗಳನ್ನು ಸರಳವಾಗಿ ಆಚರಿಸುತ್ತಿದ್ದಾರೆ. ಅಂತೆಯೇ ಈ ಬಾರಿ ಮೂರ್ತಿ ತಯಾರಕರು ಕೂಡ ಗಣೇಶನನ್ನು ಸ್ವಲ್ಪ ವಿಭಿನ್ನವಾಗಿ ರೂಪಿಸುತ್ತಿದ್ದಾರೆ.
ಹೌದು. ಕೊಯಂಬತ್ತೂರು ಮೂಲದ ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ. ಗಣೇಶ ಬಂದು ಕೊರೊನಾವನ್ನು ಹೊಡೆದು ಸಾಯಿಸುವಂತೆ ಮೂರ್ತಿಯನ್ನು ತಯಾರಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ರಾಜಾ, ಮಹಾಮಾರಿ ಕೋವಿಡ್ 19 ಎಂಬ ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನು ಈ ಗಣೇಶನ ವಿಗ್ರಹವನ್ನು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ಕಲಾವಿದರೊಬ್ಬರು ಕೂಡ ಗಣೇಶನನ್ನು ಆರೋಗ್ಯ ರಕ್ಷಕನನ್ನಾಗಿ ಮಾಡಿದ್ದರು. ಗಣೇಶನನ್ನು ವೈದ್ಯ ಹಾಗೂ ಆತನ ವಾಹನ ಇಲಿಯನ್ನು ದಾದಿಯಂತೆ ಮೂರ್ತಿ ತಯಾರಿಸಿದ್ದರು